Monday, June 30, 2025
spot_imgspot_img
spot_imgspot_img

ದಕ್ಷಿಣ ಕನ್ನಡ – ಕಾಸರಗೋಡು ಗಡಿಭಾಗದಲ್ಲಿ  ರಸ್ತೆ ಸಂಚಾರ ಮುಕ್ತ: ಡಿಸಿ ಡಾ.ಕೆ.ವಿ.ರಾಜೇಂದ್ರ.

- Advertisement -
- Advertisement -

ಮಂಗಳೂರು: ಅನ್​ಲಾಕ್ 0.3 ಅನ್ವಯ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ನಡುವಿನ ಗಡಿಭಾಗದಲ್ಲಿ ಸಂಚಾರವನ್ನು ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಗಡಿ ಭಾಗಗಳಲ್ಲಿ ದೈನಂದಿನ ಕೆಲಸದ ನಿಮಿತ್ತ ಸಂಚರಿಸುವ ಸಾರ್ವಜನಿಕರು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯಿಂದ ಮಾಸಿಕ ಪಾಸ್ ಪಡೆಯಬೇಕು. ಈ ಸಂದರ್ಭದಲ್ಲಿ ಪ್ರಯಾಣಿಕರು ಚೆಕ್ ಪೋಸ್ಟ್​ಗಳಲ್ಲಿ ಮಾಹಿತಿ ದಾಖಲಿಸಬೇಕು ಎಂದು ತಿಳಿಸಿದ್ದಾರೆ.

ಕೇರಳದ ನಿವಾಸಿಗಳು ಜಿಲ್ಲೆಯಲ್ಲಿಯೇ ವಾಸಿಸುತ್ತಿದ್ದರೇ ತಕ್ಷಣ ಸೇವಾ ಸಿಂಧು ಆ್ಯಪ್ ಮೂಲಕ ಪಾಸ್ ಪಡೆದು ತಲಪಾಡಿ ಅಥವಾ ಜಾಲ್ಸೂರು ಮೂಲಕ ಸಂಚರಿಸಬೇಕು.‌ ಅಲ್ಲದೆ ಕರ್ನಾಟಕ ರಾಜ್ಯ ಸರ್ಕಾರದ ಕೋವಿಡ್-19 ಕ್ವಾರೆಂಟೈನ್ ನಿಯಮಕ್ಕೆ ಬದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!