Saturday, June 28, 2025
spot_imgspot_img
spot_imgspot_img

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಇಂದಿನಿಂದ ತಗ್ಗಲಿರುವ ಮಳೆ ಆರ್ಭಟ

- Advertisement -
- Advertisement -

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಮಾನ್ಸೂನ್ ಅತೀ ಚುರುಕಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.

ಮಧ್ಯ ಮಹಾರಾಷ್ಟ್ರ ಹಾಗೂ ಕೊಂಕಣದಲ್ಲಿ ವಾಯುಭಾರ ಕುಸಿತವಿದ್ದು, ಮುಂದೆ ಇದು ಪೂರ್ವ ಅರಬ್ಬೀ ಸಮುದ್ರವನ್ನು ತಲುಪಲಿದೆ. ಹಾಗೇ ವಾಯುಭಾರ ಕುಸಿತ ತೀವ್ರವಾಗುವ ಸಾಧ್ಯತೆ ಇದೆ. ಸದ್ಯ ಕೊಲ್ಲೂರಿನಲ್ಲಿ 22 ಸೆಂ. ಮೀ, ಹೊಸನಗರದಲ್ಲಿ 21 ಸೆಂಮೀ, ಕೊಟ್ಟಿಗೆಹಾರದಲ್ಲಿ 17 ಸೆಂ.ಮೀ ಮಳೆಯಾಗಿದೆ.

ಕರಾವಳಿಯಲ್ಲಿ ಅ. 16 ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ, ಉ. ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ.19 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಬಹುದು ಎಂದು ಸಿ. ಎಸ್ ಪಾಟೀಲ್ ತಿಳಿಸಿದರು.

- Advertisement -

Related news

error: Content is protected !!