Sunday, June 29, 2025
spot_imgspot_img
spot_imgspot_img

ಕಾರ್ಕಳ : ಮನೆಗೆ ನುಗ್ಗಿ ಕಳವುಗೈದ ಪ್ರಕರಣ ; ಆರೋಪಿ ಬಂಧನ…!

- Advertisement -
- Advertisement -

ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕದ್ದ ಮಾಲು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಸಮೇತ ಬಂಧಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕಾರ್ಕಳ ಮಾಳ ಗ್ರಾಮದ ಸಂತೋಷ್ ಟಿ. (32) ಎಂದು ಗುರುತಿಸಲಾಗಿದೆ.

ಆಗಸ್ಟ್ 30ರಂದು ಗುರ್ಗಾಲ್‌ ಗುಡ್ಡೆಯ ಮನೆ ಪಕ್ಕದಲ್ಲಿ ಇರಿಸಿದ್ದ ಕೀಯಿಂದ ಮನೆ ಬಾಗಿಲು ತೆರೆದು ಬೆಡ್‌ ರೂಂನ ಲಾಕರ್‌ನಲ್ಲಿದ್ದ ಸುಮಾರು 10.05 ಲಕ್ಷ ಮೌಲ್ಯದ 33 ಪವನ್ ವಿವಿಧ ರೀತಿಯ ಚಿನ್ನಾಭರಣ ಕಳವಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಬಂಧಿಸಲು ಗ್ರಾಮಾಂತರ ಠಾಣಾ ಪಿಎಸ್‌ಐ ದಿಲೀಪ್ ಜಿ. ಆರ್., ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ಹಾಗೂ ಸಿಬ್ಬಂದಿ ಮಹಾಂತೇಶ್, ಪ್ರಶಾಂತ್ ಕೆ., ವಿಶ್ವನಾಥ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ ರಾಘವೇಂದ್ರ, ಅಶೋಕ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ ತಂಡವು ದ್ವಿಚಕ್ರವಾಹನವನ್ನು ಜಪ್ತಿ ಮಾಡುವುದರೊಂದಿಗೆ ಕಳವು ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.

- Advertisement -

Related news

error: Content is protected !!