- Advertisement -
- Advertisement -





ಕಾರ್ಕಳ: ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿ ವಾಪಸು ಬಾರದೇ ನಾಪತ್ತೆಯಾಗಿರುವ ಘಟನೆ ಸಾಣೂರು ಗ್ರಾಮದ ಕುಜುಮಾರು ಗುಡ್ಡೆ ರಾಜೀವ ನಗರದಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಅಮಿತಾ (19) ಎಂದು ಗುರುತಿಸಲಾಗಿದೆ.
ಅಮಿತಾ ನ. 26ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಕಳ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೊರಗೆ ಹೋದವರು ಇವರೆಗೂ ವಾಪಸು ಬಾರದೆ ನಾಪತ್ತೆಯಾಗಿದ್ದಾರೆ. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
- Advertisement -