- Advertisement -
- Advertisement -
ಕಾರ್ಕಳ ತಾಲೂಕು ಕಡ್ತಲ ಗ್ರಾಮದ ಕುಂಜಕ್ಯಾರ್ನ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಜುಗಾರಿ ಆಟ ನಡೆಸುತ್ತಿರುವುದರ ಖಚಿತ ಮಾಹಿತಿ ಪಡೆದ ಅಜೆಕಾರು ಪೊಲೀಸರು ದಾಳಿ ನಡೆಸಿದ್ದಾರೆ. ಠಾಣೆ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ದೊಡ್ಡಮನಿ ದಾಳಿ ನಡೆಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಆರೋಪಿಗಳಾದ ಮನೆಯ ಯಜಮಾನ ಪ್ರಸನ್ನ ಹೆಗ್ಡೆ, ರಾಜೇಶ್ ಶೆಟ್ಟಿ, ಹರೀಶ್ ಕಾಮತ್, ಸುರೇಂದ್ರ ಶೆಟ್ಟಿ, ಮಹೇಶ್ ಶೆಟ್ಟಿ, ಸಂತೋಷ್, ಸತೀಶ್ ಹೆಗ್ಡೆ ಬಂಧಿತ ಆರೋಪಿಗಳು.
ಅಂದರ್ ಬಾಹರ್ ಇಸ್ಪೀಟ್ ಆಟಕ್ಕೆ ಬಳಸಿದ ಒಟ್ಟು 11,420/- ರೂಪಾಯಿ, ಇಸ್ಪೀಟ್ ಎಲೆ ಸೇರಿದಂತೆ ಇತ್ಯಾದಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -