ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಬಂಧಿಸಿದ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಉಡುಪಿ: ಫೇಸ್ ಬುಕ್ ಮೂಲಕ ಪರಿಚಯವಾದ ವ್ಯಕ್ತಿಯಿಂದ ಬರೋಬ್ಬರಿ 19 ಲಕ್ಷ ರೂ ಕಳೆದುಕೊಂಡ ಮಹಿಳೆ
ಆರೋಪಿಯನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ನಿವಾಸಿ ಇಮ್ರಾನ್ (24) ಎನ್ನಲಾಗಿದೆ.
12 ವರ್ಷ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಕುರಿತು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದ ಹಿನ್ನಲೆಯಲ್ಲಿ ಆಕೆಯ ಮನೆಗೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಲಾಗಿತ್ತು.
ಇದನ್ನೂ ಓದಿ: ವಿಟ್ಲ: ಹುಲಿ ವೇಷಧಾರಿ ಕಿಟ್ಟಣ್ಣ ಅವರ ಸಹೋದರ ಗೋವಿಂದ ನಾಯ್ಕ್ ನಿಧನ
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕ ಮಧು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೊ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಾಮಾಜಿಕ ಕಾರ್ಯಕರ್ತ ಯೋಗಿಶ್, ಕಾರ್ಕಳ ನಗರ ಠಾಣಾ ಸಿಬ್ಬಂದಿಗಳಾದ ಶ್ಯಾಮ್, ರವೀಂದ್ರ ಇನ್ನಿತರರು ಸಹಕರಿಸಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ .