Saturday, June 28, 2025
spot_imgspot_img
spot_imgspot_img

ಕಾರ್ಕಳ: ರಸ್ತೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರಿಕ್ಷಾ ಚಾಲಕ; ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಾರ್ಕಳ: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿ, ಪ್ರಸ್ತುತ ಬಂಗ್ಲೆಗುಡ್ಡೆಯ ಸದ್ಬಾವನ ನಗರದಲ್ಲಿ ನಿವಾಸಿ ಮಂಜುನಾಥ (34) ಎಂಬಾತ ವಿಷ ಸೇವನೆಗೈದು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ವಿಷ ಸೇವನೆಗೈದಿದ್ದ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಸ್ಥಿತಿ ಗಂಭೀರವಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಆತ್ಮಹತ್ಯೆಯ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!