- Advertisement -
- Advertisement -





ಉಡುಪಿ: ಕಾರ್ಕಳದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಲ್ತಾಫ್ಗೆ ಜಾಮೀನು ಮಂಜೂರಾಗಿದೆ.
ಉಡುಪಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಆರೋಪಿಗೆ ಜಾಮೀನು ನೀಡಿದೆ. ಆಗಸ್ಟ್ 24 ರಂದು ಅತ್ಯಾಚಾರ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿತ್ತು.
ಗ್ಯಾಂಗ್ ರೇಪ್ ಪ್ರಕರಣ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿದ್ದ ಆರೋಪ ಕೇಳಿಬಂದಿತ್ತು. ಪ್ರಕರಣದ ಮೂವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ.
ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಆಕೆಯ ಕೆಲಸದ ಸ್ಥಳದಿಂದ ಕಾರಿನಲ್ಲಿ ಕುಕ್ಕುಂದೂರು ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ತನ್ನ ಸಹಚರ ರಿಚರ್ಡ್ ಕಾರ್ಡೋಜಾಗೆ ಹೇಳಿ ಮದ್ಯದ ಬಾಟಲಿಗಳನ್ನು ತರಿಸಿಕೊಂಡು, ಅದರಲ್ಲಿ ಮಾದಕ ದ್ರವ್ಯ ಬೆರೆಸಿ ಯುವತಿಗೆ ಬಲವಂತವಾಗಿ ಕುಡಿಸಿದ್ದಾರೆ. ಬಳಿಕ ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು.
- Advertisement -