Saturday, June 28, 2025
spot_imgspot_img
spot_imgspot_img

ಕಾರ್ಕಳ: ಓಮ್ನಿ ಹಾಗೂ ಕಾರು ನಡುವೆ ಭೀಕರ ಅಪಘಾತ-ಕಾರಿನೊಳಗೆ ಸಿಲುಕಿದ್ದ ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ ದಳ

- Advertisement -
- Advertisement -

ಕಾರ್ಕಳ: ರಸ್ತೆ ಅಪಘಾತವೊಂದರಲ್ಲಿ ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುವನ್ನು ಅಗ್ನಿಶಾಮಕ ದಳದವರು ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ನಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಕಾರಿನ ಬಾಗಿಲು ತೆರೆಯಲಾಗದೇ ಅದರಲ್ಲಿ ಗಾಯಾಳು ಸಿಲುಕಿಕೊಂಡಿದ್ದರು. ಗಾಯಾಳುವನ್ನು ಮೂಡುಬಿದಿರೆ ಒಂಟಿಕಟ್ಟೆಯ ಸಂದೇಶ್ (35) ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!