Sunday, April 28, 2024
spot_imgspot_img
spot_imgspot_img

ಕಾರ್ಕಳ : ಅಕ್ರಮ ಮರಳು ಸಾಗಾಟ; ಟಿಪ್ಪರ್ ಲಾರಿ ಪೊಲೀಸ್ ವಶ..!

- Advertisement -G L Acharya panikkar
- Advertisement -

ಕಾರ್ಕಳ : ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಮತ್ತು ಮರಳನ್ನು ಕಾರ್ಕಳ ನಗರ ಪೊಲೀಸರು ವಶಪಡಿಸಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಆರೋಪಿ ಸಂದೀಪ ಮಂಗಳೂರಿನ ಅಡ್ಡರು ಎಂಬಲ್ಲಿ ಹರಿಯುವ ನದಿಯಿಂದ ಅದ್ದೂರಿನ ಅಬ್ದುಲ್ ಸತ್ತಾರ್ ಹಾಗೂ ಕಾರ್ಕಳದ ಪುಕ್ಕೇರಿ ರಾಜೇಶ ಎಂಬವರೊಂದಿಗೆ ಸೇರಿಕೊಂಡು ಅಕ್ರಮವಾಗಿ ಮರಳನ್ನು ಕಳವು ಮಾಡಿ ಟಿಪ್ಪರ್ ಲಾರಿಗೆ ಲೋಡ್ ಮಾಡಿಕೊಂಡು ಪುಕ್ಕೇರಿ ಜಂಕ್ಷನ್ ಕಡೆಯಿಂದ ಬಂಗ್ಲೆಗುಡ್ಡೆ ಜಂಕ್ಷನ್ ಕಡೆಗೆ ಸಾಗಾಟ ಮಾಡುತ್ತಿದ್ದರು.

ಈ ವೇಳೆ ಕಸಬಾ ಗ್ರಾಮದ ಕಾಬೆಟ್ಟು ಶ್ರೀ ವೇಣುಗೋಪಾಲ ದೇವಸ್ಥಾನದ ಜಂಕ್ಷನ್ ಬಳಿ ಕಾರ್ಕಳ ನಗರ ಠಾಣಾ ಪಿಎಸ್‌ಐ ಧನಂಜಯ ಬಿ. ಸಿ. ಅವರು ಸಿಬ್ಬಂದಿಯೊಂದಿಗೆ ಬೆಳಿಗ್ಗೆ ವೇಳಗೆ ಟಿಪ್ಪ‌ರ್ ಲಾರಿಯನ್ನು ತಡೆಹಿಡಿದ್ದಾರೆ. 15,000/ ರೂ. ಮೌಲ್ಯದ ಸುಮಾರು 3 ಯುನಿಟ್ ಮರಳು ಹಾಗೂ 10,00,000/ ಮೌಲ್ಯದ ಈಚರ್ ಕಂಪೆನಿಯ ಟಿಪ್ಪರ್ ಲಾರಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!