Sunday, June 29, 2025
spot_imgspot_img
spot_imgspot_img

ಕಾರ್ಕಳ: ಐಟಿಐ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ!

- Advertisement -
- Advertisement -

ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮ ದ ನೀರೆ ಪಾಲಟ್ಟ ದಲ್ಲಿ ನಡೆದಿದೆ. ಮೃತ ಯುವಕನನ್ನು ಅನೀಶ್ (19) ಎನ್ನಲಾಗಿದೆ. ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್ ಕೋರ್ಸ್ ನ ವಿದ್ಯಾರ್ಥಿಯಾಗಿದ್ದನು.

ತಾಯಿ ಕೆಲಸಕ್ಕೆ ಹೋದ ಸಮಯದಲ್ಲಿ ಮಕ್ಕಳಾದ ಅನೀಶ್ (19) ಮತ್ತು ಮಗ ಅನ್ವಿತ್ (16) ಇಬ್ಬರೇ ಮನೆಯಲ್ಲಿ ಇದ್ದರು. ಮಧ್ಯಾಹ್ನ ಪರೀಕ್ಷೆಗೆ ಹೋಗಲು ಸಂಬಂಧಿಯಾದ ನೆರೆಮನೆಯ ಆಶಿಶ್ ಬೆಳಿಗ್ಗೆ ಕರೆ ಮಾಡಿದಾಗ ಅನೀಶ್ ಫೋನ್ ತೆಗೆಯಲಿಲ್ಲ.

ಮೃತ ಯುವಕನ ಸ್ನೇಹಿತ ಕೂಡಲೇ ಮನೆಗೆ ಹೋಗಿ ಆ ಯುವಕನ ಬೆಡ್‌ರೂಮಿನ ಬಾಗಿಲು ಬಡಿದರೂ ಬಾಗಿಲು ತೆರೆಯದ ಕಾರಣ ಕಿಟಿಕಿಯಿಂದ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ತಕ್ಷಣವೇ ಬೆಡ್‌ರೂಮಿನ ಬಾಗಿಲು ಒಡೆದು ಅನೀಶ್‌ನನ್ನು ಬೈಲೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಆತನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅನೀಶ್‌ನು ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಂದಾಜಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!