- Advertisement -





- Advertisement -
ಕಾರ್ಕಳ : ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ದುರ್ಗಾ ಗ್ರಾಮದ ಸಂದೇಶ್ ಶೆಟ್ಟಿ ಅ. 4ರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುರ್ಗ ತೆಳ್ಳಾರು ಸಂಪರ್ಕ ಸೇತುವೆಯಡಿ ಶವವೊಂದನ್ನು ಗಮನಿಸಿದ ಸ್ಥಳೀಯರು ಕಾರ್ಕಳ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮೇಲಕ್ಕೆತ್ತಿದರು.
ಸಂದೇಶ್ ಶೆಟ್ಟಿ ಕಾಣೆಯಾಗಿರುವ ಕುರಿತು ಅ. 3 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
- Advertisement -