- Advertisement -
- Advertisement -
ಕಾರ್ಕಳ : ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸರ ತಂಡ ದಾಳಿ ನಡೆಸಿ ಓರ್ವ ಮಹಿಳೆ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.
ಆರೋಪಿಗಳನ್ನು ಕಾರ್ಕಳದ ಗೋವರ್ಧನ, ಎಣ್ಣೆಹೊಳೆ ಶಿವಕೃಪಾ ನಿವಾಸಿ ಉಪೇಂದ್ರ ಯಾನೆ ಅವಿನಾಶ್ ನಾಯ್ಕ್, ಉಡುಪಿ ತಾಲೂಕಿನ ದೀಪಾ, ಅಶೋಕ್ ಕಾರ್ಕಳ ಹಾಗೂ ಕುಕ್ಕುಂದೂರು ಗ್ರಾಮದ ನಕ್ರೆ ಕಿನ್ನರಕಟ್ಟೆ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪಟ್ಲ ಮನೆಯಲ್ಲಿ ಈ ದಂಧೆ ನಡೆಯುತ್ತಿತ್ತು ಎನ್ನಲಾಗಿದೆ. ಹಣಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಹಾಗೂ ಯುವತಿಯರನ್ನು ಬಳಸಿಕೊಂಡು ಅನೈತಿಕ ದಂಧೆ ವ್ಯವಹಾರ ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ದಂಧೆಗೆ ಬಳಸಿಕೊಂಡಿದ್ದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
- Advertisement -