- Advertisement -
- Advertisement -
ಬೆಂಗಳೂರು: ನಾಳೆ ಸೋಮವಾರದಂದು KSRTC ಯಿಂದ ಅತೀ ಹೆಚ್ಚು ಬಸ್ಸುಗಳ ಕಾರ್ಯಾಚರಣೆ ಇರಲಿದೆ. 5100 ಬಸ್ಗಳನ್ನ ರಸ್ತೆಗಿಳಿಸಲು ಸಿದ್ಧತೆ ನಡೆಸಲಾಗಿದೆ ಎಂದು KSRTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ.
ಇನ್ನು ನಾಳೆ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವುದರಿಂದ ಪರಿಸ್ಥಿತಿ ನೋಡಿಕೊಂಡು ಬಸ್ಗಳನ್ನ ನಿಲ್ಲಿಸುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಪ್ರತಿ ಸೋಮವಾರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಆದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳ ಸೇವೆ ನೀಡಲು ನಿರ್ಧರಿಸಲಾಗಿದೆ. ನಾಳೆ 5100 ಬಸ್ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಲಾಗಿದೆ. ಜನರ ಬೇಡಿಕೆಗೆ ಅನುಗುಣವಾಗಿ ಬಸ್ಗಳನ್ನು ಒದಗಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
- Advertisement -