Sunday, May 19, 2024
spot_imgspot_img
spot_imgspot_img

ನಾಳೆ ರಾಜ್ಯ ಬಂದ್: ಮುಂಜಾಗ್ರತೆಯೊಂದಿಗೆ ಪೊಲೀಸರು ಫುಲ್​ ಅಲರ್ಟ್.

- Advertisement -G L Acharya panikkar
- Advertisement -

ಬೆಂಗಳೂರು: ನಾಳೆ ಕರ್ನಾಟಕ ಬಂದ್​ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದ ರೀತಿ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಎಲ್ಲಾ ಐಜಿಪಿ, ನಗರ ಪೊಲೀಸ್ ಆಯುಕ್ತ, ಹೆಚ್ವುವರಿ ಪೊಲೀಸ್ ಆಯುಕ್ತ, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.

ಇಬ್ಬರು ಹೆಚ್ಚುವರಿ ಆಯುಕ್ತರು, 10 ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದ್ದು, 60 ಎಸಿಪಿಗಳು, 140 ಇನ್ಸ್​ಪೆಕ್ಟರ್​ಗಳು, 300ಕ್ಕೂ ಹೆಚ್ಚು ಪಿಎಸ್​ಐಗಳು, 1500ಕ್ಕೂ ಹೆಚ್ಚು ಸಿವಿಲ್‌ ಹಾಗೂ ಸಂಚಾರಿ ಪೊಲೀಸರು, ಎರಡು ಸಾವಿರಕ್ಕೂ ಹೆಚ್ಚು ಕೆಎಸ್​ಆರ್​ಪಿ ಹಾಗೂ ಸಿಎಆರ್ ಪೊಲೀಸರನ್ನು ಭದ್ರತೆಗೆ ಹಾಗೂ , ನಾಳೆ ಸರ್ಕಾರಿ ಸೇವೆಗಳು ಇರುವ ಕಾರಣ ಯಾವುದೇ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಟ್ರಾಫಿಕ್ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ.

- Advertisement -

Related news

error: Content is protected !!