- Advertisement -
- Advertisement -
ಬೆಂಗಳೂರು : ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶಿಸಿದ್ದರು. ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ 19 ರಾಜ್ಯಪಾಲರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ದೇವರ ಹೆಸರಿನಲ್ಲಿ ಪದಗ್ರಹಣ ಸ್ವೀಕಾರ ಮಾಡಿದ್ದಾರೆ.


- Advertisement -