- Advertisement -
- Advertisement -
ಬೆಳಗಾವಿ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಪುಂಡಾಟಿಕೆ ಮುಂದುವರೆದಿದ್ದು, ಕರ್ನಾಟದಿಂದ ಕೊಲ್ಲಾಪುರಕ್ಕೆ ಹೋಗವು ರಾಜ್ಯ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಬೆಳಗಾವಿ ವಿಭಾಗದ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ, ಕೊಲ್ಲಾಪುರದ ಕಡೆಗೆ ಹೋಗುವ ಬಸ್ ಗಳು ನಿಪ್ಪಾಣಿ ಬಳಿಯ ಚೆಕ್ ಪೋಸ್ಟ್ ವರೆಗೆ ಹೋಗುತ್ತವೆ ಎಂದು ಹೇಳಿದ್ದಾರೆ.
ಹೆಚ್ಚಿದ ಕೊರೊನಾ ಆತಂಕ : `ಮಾಸ್ಕ್ ಇಲ್ಲದಿದ್ರೆ ಹೋಟೆಲ್ ಗೆ ನೋ ಎಂಟ್ರಿ’ : ಬಿಬಿಎಂಪಿ ಆಯುಕ್ತರ ಖಡಕ್ ಸೂಚನೆ
ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡದ ಫಲಕಗಳಿಗೆ ಮಸಿ ಬಳಿದ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕೊಲ್ಹಾಪುರದ ಬಸ್ ನಿಲ್ದಾಣ ಪ್ರದೇಶದಲ್ಲಿ ಮಹಾರಾಷ್ಟ್ರದ ಬಸ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ.
- Advertisement -