- Advertisement -
- Advertisement -
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ನೂತನ ತಾಲೂಕು ಸಮಿತಿ ರಚನಾ ಸಭೆಯು ಇಂದು ಪುತ್ತೂರಿನ ಬ್ಲಡ್ ಬ್ಯಾಂಕ್ ಬಿಲ್ಡಿಂಗ್ನಲ್ಲಿರುವ ರೋಟರಿ ಟ್ರಸ್ಟ್ ಹಾಲ್ನಲ್ಲಿ ಜರಗಿತು.
ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ಮತ್ತು ಸರಕಾರದ ಕಾರ್ಮಿಕ ಇಲಾಖೆಯಲ್ಲಿ ಸಂಯೋಜನೆಗೊಂಡಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷ ಲಕ್ಷ್ಮಣ ಕುಂದರ್, ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡು ಮತ್ತು ಕೋಶಾಧಿಕಾರಿ ಜ್ಯೋತಿಪ್ರಕಾಶ್ ಪುಣಚರವರ ಉಪಸ್ಥಿತಿಯಲ್ಲಿ ಅ.14ರಂದು ಪುತ್ತೂರಿನ ರೋಟರಿ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಈ ನೂತನ ಸಮಿತಿಯ ಅಧ್ಯಕ್ಷರಾಗಿ ಶಾಂತಿನಗರದ ಸಂತೋಷ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕೆ, ಉಪಾಧ್ಯಕ್ಷರಾಗಿ ರಾಮ್ದಾಸ್ ಶೆಟ್ಟಿ, ಮತ್ತು ಹೇಮಾ,ಮಕೋಶಾಧಿಕಾರಿ ಅನೀಶ್, ಉಪಾಧ್ಯಕ್ಷರಾಗಿ ನಿಶಾಂತ್ ಬನ್ನೂರು, ಜೊತೆ ಕಾರ್ಯದರ್ಶಿಯಾಗಿ ಚೈತ್ರಾ ಬಂಗೇರ, ರಾಜಶೇಖರ್ ಶೆಟ್ಟಿ ಅವರು ಆಯ್ಕೆಯಾಗಿರುತ್ತಾರೆ.
- Advertisement -