Saturday, May 11, 2024
spot_imgspot_img
spot_imgspot_img

ಕಾರವಾರ: ಭೀಕರ ಅಪಘಾತ :ಬಸ್ಸಿನಡಿಗೆ ಸಿಲುಕಿ ತಾಯಿ, ಮಗಳು ಸಾವು..!

- Advertisement -G L Acharya panikkar
- Advertisement -

ಕಾರವಾರ: ಸ್ಕೂಟಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ತಾಯಿ-ಮಗಳು ಬಸ್ಸಿನಡಿಗೆ ಸಿಲುಕಿ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯ ರಾಷ್ಟ್ರೀಯ ಹೆದ್ದಾರಿ 66ರ ಗುಳದಕೇರಿಯಲ್ಲಿ ನಡೆದಿದೆ.

ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು ಆಚಾರಿ (17) ಅಪಘಾತದಲ್ಲಿ ಮೃತರು.

ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಬಸ್‌ನಡಿ ಸ್ಕೂಟಿ ಸವಾರರು ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ತಪ್ಪಿಸಲು ಹೋಗಿ ಬಸ್ ಕೂಡ ಡಿವೈಡರ್ ಹತ್ತಿ ನಿಂತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!