Saturday, June 28, 2025
spot_imgspot_img
spot_imgspot_img

ಕಾಸರಗೋಡು: ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!

- Advertisement -
- Advertisement -

ಕಾಸರಗೋಡು: ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್‌ನಲ್ಲಿ ನಡೆದಿದೆ.

ಮೃತಪಟ್ಟ ಬಾಲಕ ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಸೋಹಾನ್ ಹಬೀಬ್ ಎಂದು ಗುರುತಿಸಲಾಗಿದೆ.

ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್ ಹಬೀಬ್ ದಿಢೀರ್ ನಾಪತ್ತೆಯಾಗಿದ್ದಾನೆ. ಈ ವೇಳೆ ಸಂಬಂಧಿಕರು ಮನೆಯೊಳಗೆ ಹಾಗೂ ಪರಿಸರದ ಮನೆಗಳಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೂ ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಸಂಬಂಧಿಕರು, ಶೋಧ ನಡೆಸಿದಾಗ ಮನೆ ಸಮೀಪದ 200 ಮೀಟರ್ ದೂರದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಬಾಲಕ ಹಬೀಬ್ ಕೃಷಿಕರಾದ ನೌಶಾದ್‌ರವರ ಏಕೈಕ ಪುತ್ರನಾಗಿದ್ದನು. ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದರು.

- Advertisement -

Related news

error: Content is protected !!