Thursday, July 4, 2024
spot_imgspot_img
spot_imgspot_img

ಕಾಸರಗೋಡು: ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವ ವೃದ್ಧ ಮೃತ್ಯು..! ಮೂವರಿಗೆ ಗಾಯ

- Advertisement -G L Acharya panikkar
- Advertisement -

ಕಾಸರಗೋಡು: ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ವೃದ್ಧರೋರ್ವರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆಯಲ್ಲಿ ನಡೆದಿದೆ.

ಮೀಂಜ ತಲೆಕ್ಕಳ ಡಾ. ಅಬೂಬಕ್ಕರ್ ಮುಸ್ಲಿಯಾರ್ (65) ಮೃತ ದುರ್ದೈವಿ. ಗಾಯಾಳುಗಳನ್ನು ಪತ್ನಿ ಅಮೀನಾ, ಪುತ್ರಿ ಸಬೀರಾ ಮತ್ತು ಸುಮಯ್ಯ ಎಂದು ಗುರುತಿಸಲಾಗಿದೆ.

ಸೋಮವಾರ ಪಾವೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುತ್ತಿದ್ದ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಮೊರತ್ತಣೆ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಅಬೂಬಕ್ಕರ್ ಮುಸ್ಲಿಯಾರ್ ಸಂಚರಿಸುತ್ತಿದ್ದ ಆಲ್ಟೋ ಕಾರು ಮತ್ತು ಹೊಸಂಗಡಿ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿನ ನಡುವೆ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಅಬೂಬಕ್ಕರ್ ರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಉಳಿದ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!