Wednesday, May 15, 2024
spot_imgspot_img
spot_imgspot_img

ಕಾಸರಗೋಡು: ಪತಿಯ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ; ಆರೋಪಿ ಪತಿಯ ಬಂಧನ

- Advertisement -G L Acharya panikkar
- Advertisement -

ಕಾಸರಗೋಡು : ಗಂಡನ ಮನೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪತಿಯನ್ನು ನೀಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಮಟಿಕೈ ಎರಿಕುಳಂ ನಾರದ ನಿವಾಸಿ ಜಯಪ್ರಕಾಶ್ (45) ಬಂಧಿತ ವ್ಯಕ್ತಿ.

ಚಿರಾಪುರಂ ಮೂಲದ ಶೀಜಾ (23)ಈ ತಿಂಗಳ 19 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆಯ ಮರುದಿನದಿಂದ ಆರೋಪಿ ಜಯಪ್ರಕಾಶ್ ತಲೆಮರೆಸಿಕೊಂಡಿದ್ದ. ಶೀಜಾಳ ತವರು ಮನೆಯವರು ಈ ಬಗ್ಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಶೀಜಾ ಅವರಿಗೆ ಜಯಪ್ರಕಾಶ್ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಅದರಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!