Saturday, June 28, 2025
spot_imgspot_img
spot_imgspot_img

ಕಾಸರಗೋಡು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಕಾಸರಗೋಡು: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಗೋಳಿಯಡ್ಕ ದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಗೋಳಿಯಡ್ಕದ ಅನಿಲ್ ಕುಮಾರ್ ( 26) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅನಿಲ್ ಕುಮಾರ್ ರ ತಂದೆ ಬೇರೊಂದು ಮಹಿಳೆ ಜೊತೆ ನಾಲ್ಕು ದಿನಗಳ ಹಿಂದೆ ವಿವಾಹವಾಗಿದ್ದರು. ಈ ವಿವಾಹಕ್ಕೆ ಅನಿಲ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬುಧವಾರ ರಾತ್ರಿ ಕೋಣೆಯಲ್ಲಿ ಮಲಗಿದ್ದ ಅನಿಲ್ ಕುಮಾರ್ ಮರು ದಿನ ತಡವಾದರೂ ಹೊರಬರದ ಹಿನ್ನಲೆಯಲ್ಲಿ ಕಿಟಿಕಿಯಲ್ಲಿ ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಅನಿಲ್ ಕುಮಾರ್ ನ ವಿವಾಹ ಡಿಸೆಂಬರ್ ನಲ್ಲಿ ನಿಗಧಿಯಾಗಿತ್ತು. ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದರು.

- Advertisement -

Related news

error: Content is protected !!