Sunday, June 29, 2025
spot_imgspot_img
spot_imgspot_img

ಕಾಸರಗೋಡು: ಹೊಳೆಗೆ ಸ್ನಾನಕ್ಕೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!

- Advertisement -
- Advertisement -

ಕಾಸರಗೋಡು: ಹೊಳೆಗೆ ಸ್ನಾನಕ್ಕೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಕಾಸರಗೋಡುನ ಪಯಸ್ವಿನಿ ಹೊಳೆಯ ಆದೂರು ಮಂಞಿಪ್ಪಾರೆ ಯಲ್ಲಿ ನಡೆದಿದೆ.

ಮೃತಪಟ್ಟ ಯುವಕ ಆದೂರು ಮಂಞಿಪ್ಪಾರೆಯ ಇಲ್ಯಾಸ್ (31) ಎಂದು ಗುರುತಿಸಲಾಗಿದೆ.

ಹೊಳೆಗೆ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಮುಳುಗಿದ್ದು, ಸ್ಥಳೀಯರು ಮೇಲಕ್ಕೆತ್ತಲು ಪ್ರಯತ್ನಿಸಿದರೂ ಸಾಧ್ಯ ವಾಗಲಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತ ದೇಹವನ್ನು ಮೇಲಕ್ಕೇತ್ತಿದರು.ಆದೂರು ಠಾಣಾ ಪೊಲೀಸರು ಮಹಜರು ನಡೆಸಿದರು. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು,ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಮೃತದೇಹವನ್ನು ನೀಡಲಾಯಿತು.

- Advertisement -

Related news

error: Content is protected !!