- Advertisement -
- Advertisement -
ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ.
ಪೆರುವಾಡ್ ಕಡಪ್ಪುರದ ಅನಾಸ್ (27) ಮೃತಪಟ್ಟವರು.
ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( 20) ಮತ್ತು ಸುಹೈಲ್ ( 28) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಅನಾಸ್ನನ್ನು ಕುಂಬಳೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಒಂದೇ ಸ್ಕೂಟರ್ನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ರಸ್ತೆ ಬದಿಯ ಕಲ್ಲಿಗೆ ಬಡಿದು ಸ್ಕೂಟರ್ ಮಗುಚಿ ಬಿದ್ದು ಈ ದುರ್ಘಟನೆ ನಡೆದಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -