Monday, June 30, 2025
spot_imgspot_img
spot_imgspot_img

ಕಾಸರಗೋಡು: ರೈಲಿಗೆ ಕಲ್ಲೆಸೆದ ಆರೋಪಿಯ ಬಂಧನ..!

- Advertisement -
- Advertisement -

ಕಾಸರಗೋಡು: ರೈಲಿಗೆ ಕಲ್ಲೆಸೆದ ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ತೆಕ್ಕಿಲ್ ಮೈಲಾಟಿ ಯ ಎಸ್ .ಅನಿಲ್ ಕುಮಾರ್ (41) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಮಲಬಾರ್ ಎಕ್ಸ್ ಪ್ರೆಸ್ ರೈಲಿಗೆ ಈತ ಕಲ್ಲೆಸೆದಿದ್ದನು. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಇದೇ ರೈಲಿನಲ್ಲಿದ್ದ ಯುವತಿಗೆ ಕಿರುಕುಳ ನೀಡಲೆತ್ನಿಸಿದ್ದು, ಇದನ್ನು ಯುವತಿ ಜೊತೆ ಇದ್ದ ಯುವಕ ಪ್ರಶ್ನಿಸಿದ್ದಾನೆ. ಈ ಸಂದರ್ಭ ದಲ್ಲಿ ಈತ ಹಲ್ಲೆಗೆ ಮುಂದಾಗಿದ್ದಾನೆ.

ಆರೋಪಿ ಪಾನಮತ್ತನಾಗಿದ್ದನು ಎನ್ನಲಾಗಿದೆ. ಬೇಕಲ ರೈಲ್ವೆ ನಿಲ್ದಾಣದಲ್ಲಿ ಇಳಿದ ಈತ ಮತ್ತೆ ದಾಂಧಲೆಗೆ ಮುಂದಾಗಿದ್ದು, ರೈಲಿಗೆ ಕಲ್ಲೆಸೆದಿದ್ದನು.ಆದಿತ್ಯವಾರ ರಾತ್ರಿ ಬೇಕಲ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಿದ ರೈಲ್ವೆ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ನಡೆಸಿದ ತನಿಖೆಯಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

- Advertisement -

Related news

error: Content is protected !!