Saturday, June 28, 2025
spot_imgspot_img
spot_imgspot_img

ಕಾಸರಗೋಡು: ಕೊಲೆ ಯತ್ನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

- Advertisement -
- Advertisement -

ಕಾಸರಗೋಡು: ಕೊಲೆ ಯತ್ನ ಹಾಗೂ ಇನ್ನಿತರ ಪ್ರಕರಣಗಲ್ಲಿ ಶಾಮೀಲಾಗಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ತಲೆಮರೆಸಿಕೊಂಡ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ (40) ಎಂದು ಗುರುತಿಸಲಾಗಿದೆ.

2018ರಲ್ಲಿ ಉಪ್ಪಳದಲ್ಲಿ ಮುಸ್ತಫಾ ಎಂಬವರನ್ನು ಇರಿದು ಕೊಲೆಗೆತ್ನಿಸಿದ ಪ್ರಕರಣದ ಆರೋಪಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನನ್ನು 2020ರಲ್ಲಿ ಬಂಧಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಕೋವಿಡ್ ನಿಗಾ ಘಟಕಕ್ಕೆ ಈತನನ್ನು ದಾಖಲಿಸಲಾಗಿತ್ತು.

ಈ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಂಡಿದ್ದನು. ಕರ್ನಾಟಕ, ಆಂಧ್ರಪ್ರದೇಶ ಮೊದಲಾದೆಡಗಳಲ್ಲಿ ತಲೆಮರೆಸಿಕೊಂಡಿದ್ದನು. ಕೊಲೆಯತ್ನ, ಮಾದಕ ವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಮೀಲಾಗಿದ್ದನು.

- Advertisement -

Related news

error: Content is protected !!