- Advertisement -
- Advertisement -
ಕಾಸರಗೋಡು: ಕೇರಳದ ಕಾಸರಗೋಡಿನಲ್ಲಿ ಬಿಜೆಪಿ ಕಾರ್ಯಕರ್ತರ ಒಂದು ಗುಂಪು ಪಕ್ಷದ ಜಿಲ್ಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಆರಂಭಿಸಿದ್ದಾರೆ.
ಕುಂಬಳ ಗ್ರಾಮ ಪಂಚಾಯತ್ ಚುನಾವಣೆ ವೇಳೆ ಸಿಪಿಎಂ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಈ ರೀತಿ ಪ್ರತಿಭಟನೆ ಆರಂಭಿಸಲಾಗಿದೆ. ಜಿಲ್ಲಾ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂಬಳ ಪಂಚಾಯತಿನ ಸಮಿತಿ ಸದಸ್ಯರ ಆಯ್ಕೆ ವೇಳೆ ಬಿಜೆಪಿ ನಾಯಕರು ಸಿಪಿಎಂಗೆ ಸಹಕಾರ ನೀಡಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
- Advertisement -