- Advertisement -
- Advertisement -






ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟು, ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸಿದ್ದಾರ್ಥ್ (23) ಹಾಗೂ ಸಹ ಸವಾರ ವೈಷ್ಣವ್ (22) ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಸಿದ್ದಾರ್ಥ್ ಎಂಬ ಯುವಕನ ಜೀವ ಉಳಿಸಲಾಗಲಿಲ್ಲ. ವೈಷ್ಣವ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲ ಠಾಣಾ ಪೊಲೀಸರು ಸ್ಥಳ ಮಹಜರು ನಡೆಸಿದರು.
- Advertisement -