


ಕಾಸರಗೋಡು: ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಓರ್ವ ನನ್ನು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ (20) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದೆ . ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿದರು. ಘಟನೆಗೆ ಸಂಬಂಧಪಟ್ಟಂತೆ 15 ವಿದ್ಯಾರ್ಥಿಗಳು ಹಾಗೂ 10 ಹೊರಗಿಂದ ಬಂದ ತಂಡದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು , ತನಿಖೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಂಬಳೆ ಮಾರುಕಟ್ಟೆ ರಸ್ತೆಯಲ್ಲಿ ಘಟನೆ ನಡೆದಿದೆ. ವರ್ತಕರು ಹಾಗೂ ಮೀನು ಮಾರಾಟಗಾರರು ಮನವೊಲಿಸಲು ಯತ್ನಿಸಿದರೂ ವಿಫಲಗೊಂಡ ಹಿನ್ನಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಗುಂಪನ್ನು ಚದುರಿಸಿ ನಿಯಂತ್ರಣಕ್ಕೆ ತಂದರು. ಈ ಹಿಂದೆಯೂ ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿತ್ತು. ಇದೀಗ ಪುನರಾವರ್ತನೆಯಾಗಿದೆ. ಕ್ಷುಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ಘರ್ಷಣೆ ನಡೆದಿದೆ.