Saturday, June 28, 2025
spot_imgspot_img
spot_imgspot_img

ಕಾಸರಗೋಡು: ಮೊಬೈಲ್ ವಿಚಾರಕ್ಕೆ ತಾಯಿ ಮಗನ ಮಧ್ಯೆ ಜಗಳ; ಹಲಗೆಯಿಂದ ಬಡಿದು ಕೊಲೆಗೈದ ಮಗ

- Advertisement -
- Advertisement -

ಕಾಸರಗೋಡು: ಮೊಬೈಲ್ ಹೆಚ್ಚು ಬಳಸಬೇಡ ಎಂದ ತಾಯಿಯನ್ನು ಮಗನೊಬ್ಬ ಹಲಗೆಯಿಂದ ಬಡಿದು ಕೊಲೆಗೈದ ಘಟನೆ ನೀಲೇಶ್ವರದಲ್ಲಿ ನಡೆದಿದೆ.

ನೀಲೇಶ್ವರ ಕಣಿಚ್ಚರದ ರುಕ್ಷ್ಮಿಣಿ (63) ಕೊಲೆಯಾದವರು. ಕೊಲೆಗೈದ ಆರೋಪಿ ಪುತ್ರ ಸುಜಿತ್(34)ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಮೂಬೈಲ್ ಫೋನ್ ಹೆಚ್ಚು ಬಳಕೆ ಮಾಡಬೇಡ ಎಂದು ತಾಯಿ ಹೇಳಿದಾಗ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಕೊನೆಗೊಂಡಿದೆ.


ಹಲಗೆಯಿಂದ ತಲೆಗೆ ಬಡಿದ ಪರಿಣಾಮ ರುಕ್ಮಿಣಿ ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪೊಲೀಸರು ಆರೋಪಿಯನ್ನು ಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ವೈದ್ಯರು ಈತನಿಗೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ.

- Advertisement -

Related news

error: Content is protected !!