Friday, May 3, 2024
spot_imgspot_img
spot_imgspot_img

ಕಾಸರಗೋಡು: ತಾಯಿ ಮನೆಯಲ್ಲಿ ನೇಣು ಬಿಗಿದು ವಿವಾಹಿತೆ ಆತ್ಮಹತ್ಯೆಗೆ ಶರಣು..!!

- Advertisement -G L Acharya panikkar
- Advertisement -

ಕಾಸರಗೋಡು: ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ನಡೆದಿದೆ. ಬೇಳ ವಿ.ಎಂ. ನಗರದ ದಾಮೋದರರವರ ಪುತ್ರಿ ಅಶ್ವತಿ(25) ಮೃತ ಪಟ್ಟವರು.

ಸೋಮವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃತ್ಯ ನಡೆದಿದೆ. ಮನೆ ಸಮೀಪದ ಬೀಡಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುವ ತಾಯಿ ಸುಜಾತ ಮಧ್ಯಾಹ್ನ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.

ಬಾಗಿಲು ಬಡಿದರೂ ತೆರೆಯದಿದ್ದುರಿಂದ ನೆರೆಯ ಮನೆಯವರಿಗೆ ಮಾಹಿತಿ ನೀಡಿದ್ದು, ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದಿರುವುದು ಕಂಡು ಬಂದಿದೆ. ಅಶ್ವತಿ ಕಣ್ಣೂರಿನಲ್ಲಿ ವಸ್ತ್ರ ದಂಗಡಿ ನೌಕರಿಯಾಗಿದ್ದು, ಎರಡು ದಿನಗಳಿಂದ ರಜೆಯಲ್ಲಿದ್ದಳು. ಪತಿ ಮನೋಹರ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!