- Advertisement -
- Advertisement -
ಕಾಸರಗೋಡು: ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಗೆ ಮಾನಸಿಕ ಕಿರುಕುಳ ನೀಡಿದ ಯುವಕನನ್ನು ವಿದ್ಯಾನಗರ ಪೊಲೀಸರು ಬಂಧಿಸಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಬಂಧಿತ ಆರೋಪಿ ಮಾನ್ಯ ಕೊಲ್ಲಂಗಾನದ ಅಲ್(25) ಎಂದು ಗುರುತಿಸಲಾಗಿದೆ.
ಬಾಲಕಿ ಪ್ರಯಾಣಿಸುವ ಬಸ್ಸಿನಲ್ಲೂ, ಬಸ್ಸಿನಿಂದ ಇಳಿದು ನಡೆದು ಹೋಗುವಾಗಲು ಆಕೆಯನ್ನು ಹಿಂಬಾಲಿಸಿ ಈತ ತೊಂದರೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ಈತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -