- Advertisement -
- Advertisement -
ಕಾಸರಗೋಡು: ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಪುಲಿಕಡವು ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಪನತ್ತಡಿಯ ರಾಹುಲ್ (20) ಎಂದು ಗುರುತಿಸಲಾಗಿದೆ.
ರಾಹುಲ್ ರಾಜಾಪುರ ಸೈಂಟ್ ಪಾಯಸ್ ಟೆಂತ್ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದರು. ಶುಕ್ರವಾರ ಸಂಜೆ ಸಹಪಾಠಿಗಳ ಜೊತೆ ಪುಲಿಕಡವು ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ರಾಜಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -