Thursday, May 2, 2024
spot_imgspot_img
spot_imgspot_img

ಕಾಸರಗೋಡು: ಶಬರಿಮಲೆ ಯಾತ್ರಿಕರನ್ನು ಹೊತ್ತೂಯ್ಯುತಿದ್ದ ಬಸ್ ಪಲ್ಟಿ..!

- Advertisement -G L Acharya panikkar
- Advertisement -

ಕಾಸರಗೋಡು: ಶಬರಿಮಲೆ ಕ್ಷೇತ್ರಕ್ಕೆ ತೆರಳಿ ಹಿಂದಿರುಗುತ್ತಿದ್ದ ಆಂಧ್ರ ಪ್ರದೇಶದ ಯಾತ್ರಿರನ್ನು ಒಳಗೊಂಡ ಖಾಸಗಿ ಬಸ್ಸೊದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 7 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನೀಲಕಲ್ ಸಮೀಪದ ಲಾಹಾ ಎಂಬಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿರುವ ಮಿನಿ ಬಸ್‌ನಲ್ಲಿ 36 ಮಂದಿ ಪ್ರಯಾಣಿಸುತ್ತಿದ್ದರು.

ಲಾಹಾ ಎಂಬಲ್ಲಿ ತಿರುವು ಪಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ಡಿವೈಡರ್‌ ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಬದಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ 7 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಆವರನ್ನು ಪತ್ತನಂತಿಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ರಕ್ಷಣಾ ಕಾರ್ಯಗಳನ್ನು ಕೈಗೊಂಡು ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

- Advertisement -

Related news

error: Content is protected !!