Thursday, May 2, 2024
spot_imgspot_img
spot_imgspot_img

ಕಾಸರಗೋಡು: ಸೇತುವೆಯಿಂದ ನದಿಗೆ ಹಾರಿದ್ದ ವ್ಯಾಪಾರಿಯ ಮೃತದೇಹ ಪತ್ತೆ..!

- Advertisement -G L Acharya panikkar
- Advertisement -

ಕಾಸರಗೋಡು: ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಶುಕ್ರವಾರ ಮುಂಜಾನೆ ನನ್ನ ಜೀವನ ಅಂತ್ಯಗೊಳಿಸುವುದಾಗಿ ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ ಸಂದೇಶ ಕಳುಹಿಸಿದ್ದ ಹಸೈನಾರ್ ಬಳಿಕ ಕಾರಿನಲ್ಲಿ ಬಂದು ಚಂದ್ರಗಿರಿ ಸೇತುವೆಯಲ್ಲಿ ನಿಲ್ಲಿಸಿ ನಂತರ ನದಿಗೆ ಹಾರಿದ್ದರು ಎಂದು ತಿಳಿದು ಬಂದಿದೆ. ಇವರು ನದಿಗೆ ಹಾರುತ್ತಿರುವುದನ್ನು ಗಮನಿಸಿದ ಪ್ರತ್ಯಕ್ಷದರ್ಶಿರೋರ್ವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿತ್ತು. ಬಳಿಕ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ನಾಗರಿಕರು ಶೋಧ ನಡೆಸಿದ್ದರು ಎಂದು ತಿಳಿದು ಬಂದಿದೆ.

ಘಟನೆ ನಡೆದ ಒಂದು ಕಿ.ಮೀ ದೂರದ ನದಿ ತೀರದಲ್ಲಿ ಶನಿವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!