

ಕಾಸರಗೋಡು: ಮಹಿಳಾ ಪೊಲೀಸ್ ಆದ ಪತ್ನಿಯನ್ನು ಪತಿ ಕಡಿದು ಕೊಲೆಗೈದು ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ನಡೆದಿದೆ.
ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ (35) ಕೊಲೆ ಗೀಡಾರವರು. ಪತಿ ರಾಜೇಶ್ ಕೃತ್ಯ ನಡೆಸಿದ ಆರೋಪಿ
ಗಂಭೀರ ಗಾಯಗೊಂಡ ದಿವ್ಯಶ್ರೀ ರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ. ದಿವ್ಯ ಶ್ರೀ ಹಾಗೂ ಆಟೋ ಚಾಲಕನಾಗಿರುವ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು .ಇದರಿಂದ ಕೆಲ ದಿನಗಳಿಂದ ಇಬ್ಬರೂ ಬೇರ್ಪಟ್ಟು ವಾಸವಾಗಿದ್ದರು ಎನ್ನಲಾಗಿದೆ.
ಗುರುವಾರ ಸಂಜೆ ತಲವಾರು ತೆಗೆದುಕೊಂಡು ಬಂದ ರಾಜೇಶ್ ದಿವ್ಯಶ್ರೀ ಮೇಲೆ ಹಲ್ಲೆ ನಡೆಸಿದ್ದು, ಮುಖ ಹಾಗೂ ಕುತ್ತಿಗೆಗೆ ಗಂಭೀರ ಗಾಯಗೊಂಡಿದ್ದರು. ಮಗಳ ಮೇಲಾಗುತ್ತಿದ್ದ ಹಲ್ಲೆ ತಡೆಯಲು ಯತ್ನಿಸಿದ ದಿವ್ಯಾಶ್ರೀಯವರ ತಂದೆ ವಾಸು ಅವರ ಮೇಲೂ ಆರೋಪಿ ರಾಜೇಶ್ ಹಲ್ಲೆ ನಡೆಸಿದ್ದು ಅವರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃತ್ಯ ಎಸಗಿದ ಬಳಿಕ ಘಟನಾ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ರಾಜೇಶನನ್ನು ಕಣ್ಣೂ ನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಾಲಂ ಗಳಡಿ ಪ್ರಕರಣ ದಾಖಲಿಸಲಾಗಿದೆ.