Sunday, June 21, 2026
spot_imgspot_img
spot_imgspot_img

ಕಾಸರಗೋಡು : ರೈಲಿನಿಂದ ಬಿದ್ದು ಯುವಕ ಮೃತ್ಯು

- Advertisement -
- Advertisement -

ಕಾಸರಗೋಡು : ಕುಂಪಲ ಮುಟ್ಟಂ ಗುಡ್ಡದ ಯುವಕನೊಬ್ಬ ರೈಲಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮುತ್ತಂ ಕುನ್ನ ಅಬ್ದುಲ್ ರಹಿಮಾನ್ ಅವರ ಪುತ್ರ ಹುಸೇನ್ ಸವಾದ್ (35) ಮೃತರು. ಶುಕ್ರವಾರ ಸಂಜೆ ಅಪಘಾತ ಸಂಭವಿಸಿದೆ. ಕುಂಬಳೆ ರೈಲು ನಿಲ್ದಾಣದ ಬಳಿ ಬರುತ್ತಿದ್ದಾಗ ಸವಾದ್ ಬಾಗಿಲ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ರೈಲು ಆರಿಕ್ಕಾಡಿ ಮೂರ್ತೋಟಿ ತಲುಪಿದಾಗ ಸವಾದ್ ರೈಲಿನಿಂದ ಬಿದ್ದಿದ್ದಾರೆ. ಇದನ್ನು ಕಂಡ ಇತರೆ ಪ್ರಯಾಣಿಕರು ಕೂಡಲೇ ಕುಂಬಳೆ ಪೊಲೀಸರಿಗೆ ಹಾಗೂ ರೈಲು ನಿಲ್ದಾಣಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಕುಂಬಳೆ ಇನ್ಸ್ ಪೆಕ್ಟರ್ ಕೆ.ಪಿ.ವಿನೋದ್ ಕುಮಾ‌ರ್ ಮತ್ತು ಎಸ್ ಐ ಶ್ರೀಜೇಶ್ ನೇತೃತ್ವದ ಪೊಲೀಸ್ ತಂಡ ಮೃತದೇಹವನ್ನು ಪತ್ತೆ ಹಚ್ಚಿದೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬಯೋಡೇಟಾವನ್ನು ಗಲ್ಸ್‌ಗೆ ಕಳುಹಿಸಲು ಸವಾದ್ ಮನೆಯಿಂದ ಕಾಸರಗೋಡಿಗೆ ತೆರಳಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!