- Advertisement -
- Advertisement -
ಕಾಸರಗೋಡು: ಅಣ್ಣನೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಸೀತಾಂಗೋಳಿಯ ಮುಗು ಎಂಬಲ್ಲಿ ನಡೆದಿದೆ.
ಮೃತರನ್ನು ಮುಗು ಉರ್ಮಿಯ ಅಬ್ದುಲ್ಲಾ ಮುಸ್ಲಿಯಾರ್ ಎಂಬವರ ಪುತ್ರ ನಿಸಾರ್(35) ಎನ್ನಲಾಗಿದೆ. ಕೃತ್ಯದ ಬಳಿಕ ಆತನ ಅಣ್ಣ ರಫೀಕ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ನಿಸಾರ್ ನನ್ನು ತಕ್ಷಣವೇ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಘಟನೆಯ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ.
- Advertisement -