Tuesday, May 14, 2024
spot_imgspot_img
spot_imgspot_img

ಕಾಸರಗೋಡು : ತಮ್ಮನನ್ನೇ ಕೊಲೆಗೈದ ಅಣ್ಣ; ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

- Advertisement -G L Acharya panikkar
- Advertisement -

ಕಾಸರಗೋಡು : ಅಣ್ಣನೇ ತನ್ನ ಸಹೋದರನನ್ನು ಇರಿದು ಕೊಲೆಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆಯಲ್ಲಿ ನಡೆದಿದೆ.

ಪೈವಳಿಕೆ ಕಳಾಯಿಯ ಪ್ರಭಾಕರ ನೋಂಡಾ (40) ಕೊಲೆಗೀಡಾದವರು. ಸಹೋದರ ಜಯರಾಮ ನೋಂಡಾ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹತ್ಯೆ ಮಾಡಿ ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಪುತ್ತೂರಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೇರಳ ಪೊಲೀಸರು ಪುತ್ತೂರು ನಗರ ಪೊಲೀಸರ ಸಹಕಾರದಿಂದ ಆರೋಪಿಯನ್ನು ಕೊಂಬೆಟ್ಟು ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!