- Advertisement -
- Advertisement -

ಕಾಸರಗೋಡು: ಬಸ್ಸು ಚಾಲಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿ ಬದಿಯಡ್ಕ ಮೂಕಂಪಾರೆಯ ರಾಜೇಶ್ (35)ಎನ್ನಲಾಗಿದೆ.

ಕಾಸರಗೋಡು – ತಲಪಾಡಿ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಸು ಚಾಲಕರಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃತ್ಯ ನಡೆಸಿದ್ದು, ಸ್ಥಳೀಯರು ಮನೆಗೆ ಬಂದ ಸಂದರ್ಭದಲ್ಲಿ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಲುಪಿಸಿದರೂ ಆದರೆ ಅದಾಗಲೇ ಮೃತಪಟ್ಟಿದ್ದರು.

ರಾಜೇಶ್ ಕೆಲ ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದುಕೊಂಡಿದ್ದರು ಎಂದು ತಿಳಿದುಬಂದಿದೆ. ಘಟನೆಯ ಕುರಿತು ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


- Advertisement -