Friday, March 29, 2024
spot_imgspot_img
spot_imgspot_img

ಕಾಸರಗೋಡು : ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಕಾಸರಗೋಡು : ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬದಲ್ಲಿ ನಡೆದಿದೆ. ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಪಟ್ಟ ಬಾಲಕಿ.

ಮೊಬೈಲ್ ಗೇಮ್ ಆಡುತ್ತಿದ್ದುದನ್ನು ಗಮನಿಸಿದ್ದ ತಾಯಿ ಮೊಬೈಲ್ ಕಿತ್ತುಕೊಂಡಿದ್ದರು ಎನ್ನಲಾಗಿದೆ. ಇದಾದ ಬಳಿಕ ರಾತ್ರಿ ಕಿಟಿಕಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ಗಮನಿಸಿದ ಮನೆಯವರು ಹಾಗೂ ಪರಿಸರವಾಸಿಗಳು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಮೃತ ಶಾಹಿನಾ ಚಂದ್ರಗಿರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಮೇಲ್ಪರಂಬ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!