Friday, March 29, 2024
spot_imgspot_img
spot_imgspot_img

ಕಾಸರಗೋಡು: ಹಾಡಹಗಲೇ ವ್ಯಕ್ತಿಯನ್ನು ಥಳಿಸಿ ಕೊಲೆಗೈದ ದುಷ್ಕಮಿಗಳು!

- Advertisement -G L Acharya panikkar
- Advertisement -

ಕಾಸರಗೋಡು: ಹಾಡಹಗಲೇ ದುಷ್ಕಮಿಗಳ ಗುಂಪೊಂದು ವ್ಯಕ್ತಿಯೋರ್ವನನ್ನು ಥಳಿಸಿ ಕೊಲೆಗೈದ ದಾರುಣ ಘಟನೆ ಶನಿವಾರ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತರನ್ನು ಚೆಮ್ನಾಡ್ ದೇಳಿಯ ಮುಹಮ್ಮದ್ ರಫೀಕ್ (48) ಎಂದು ಗುರುತಿಸಲಾಗಿದೆ.

ನಗರದ ಖಾಸಗಿ ಆಸ್ಪತ್ರೆ ಸಮೀಪ ಈ ಘಟನೆ ನಡೆದಿದೆ.ರಫೀಕ್ ರವರು ಆಸ್ಪತ್ರೆ ಸಮೀಪದ ಮೆಡಿಕಲ್ ಸ್ಟೋರ್ ನಲ್ಲಿ ಔಷಧಿ ಖರೀದಿಸುತ್ತಿದ್ದ ಸಂದರ್ಭ ಗುಂಪೊಂದು ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ರಫೀಕ್ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕಾಸರಗೋಡು ಡಿವೈ.ಎಸ್.ಪಿ.  ಪಿ.ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement -

Related news

error: Content is protected !!