ಶ್ರೀನಗರ: ಜಮ್ಮು-ಕಾಶ್ಮೀರದ ಬಟಮಾಲೂನಲ್ಲಿ ಇಂದು ನಡೆದಿರುವ ಎನ್ಕೌಂಟರ್ ಅಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದು ಹಾಕಿದೆ.
ಶ್ರೀನಗರದ ಬಟಾಮಲೂ ಪ್ರದೇಶದಲ್ಲಿ ಉಗ್ರರು ಅವಿತಿರುವ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ
ಇಂದು ಮುಂಜಾನೆ 2.30ರ ಸುಮಾರಿಗೆ ಬಟಮಾಲೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಎನ್ಕೌಂಟರ್ ಅಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಬಟಮಾಲೂನ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ಕಾರ್ಯಚರಣೆ ಇನ್ನೂ ನಡೆಯುತ್ತಿದೆ.
ಇಬ್ಬರು ಯೋಧರಿಗೆ ಗಾಯಗೊಂಡಿದ್ದು, ಅವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.
Jammu and Kashmir: Three terrorists neutralised in encounter with security forces in Batamaloo area of Srinagar
— ANI (@ANI) September 17, 2020
(visuals deferred by unspecified time) pic.twitter.com/1vo56F3Luh