- Advertisement -
- Advertisement -
ಕಟಪಾಡಿ: ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಕಟಪಾಡಿ ಬಳಿಯ ಅಚ್ಚಡ ಎಂಬಲ್ಲಿ ಪತ್ತೆಯಾಗಿದೆ.
ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
- Advertisement -