- Advertisement -
- Advertisement -
ಕಟೀಲು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸೌಂದರ್ಯ ರೆಸಾರ್ಟ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪಾಲಾಡ್ಕ ನಿವಾಸಿ ವಿಶ್ವನಾಥ ನಾಯಕ್ (45) ಎಂದು ಗುರುತಿಸಲಾಗಿದೆ.
ಮೃತ ಚಾಲಕ ಶುಂಠಿಲ ಪದವು ಬಳಿಯಿಂದ ಲಾರಿಯಲ್ಲಿ ಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಚಲಿಸಿ, ಹೊಂಡಕ್ಕೆ ಬಿದ್ದಿದೆ. ಈ ಸಂದರ್ಭ ಚಾಲಕ ಟಿಪ್ಪರ್ ನ ಒಳಗಡೆ ಸಿಲುಕಿಕೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -