ಕಲ್ಲಡ್ಕ: ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇಲ್ಲಿನ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ 538 ಸೇವಾ ಯೋಜನೆ “ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ”ವು ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ನಲ್ಲಿ ಜೂನ್ 11ರ ಆದಿತ್ಯವಾರದಂದು ನಡೆಯಲಿದೆ.
ಶಿಬಿರವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿದ್ದು, ಶಾಸಕ ರಾಜೇಶ್ ನಾೖಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ.
ಮೋಹನ್ ರಾಜ್ ಚೌಟ ಪುಂಜೋಳಿ ಮಾರುಗುತ್ತು ಇವರ ಶುಭ ಆಶೀರ್ವಾದದೊಂದಿಗೆ, ಶ್ರೀ ಮಂತ್ರ ದೇವತಾ ಸೇವಾ ಟ್ರಸ್ಟ್, ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ), ಶ್ರೀ ದೇವಿ ಆಪ್ಟಿಕಲ್ಸ್ ಉಪ್ಪಿನಂಗಡಿ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ನುರಿತ ಕಣ್ಣಿನ ತಜ್ಞರಾದ ಡಾ.ಸುಧೀಂದ್ರರಾವ್ ಎನ್. ಇವರ ನೇತೃತ್ವದಲ್ಲಿ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರು ಇಲ್ಲಿನ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಹುಟ್ಟು ಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ 538 ಸೇವಾ ಯೋಜನೆ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರವು ಬೆಳಗ್ಗೆ 9:30ರಿಂದ ಮಧ್ಯಾಹ್ನ 1ಗಂಟೆಯವರೆಗೆ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ನಡೆಯಲಿದೆ.