Sunday, May 5, 2024
spot_imgspot_img
spot_imgspot_img

ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರದ ಮಹಿಮೆ; ದೈವದ ಅಭಯ-ಅಚ್ಚರಿ ಗೊಳಿಸಿದ ಘಟನೆ

- Advertisement -G L Acharya panikkar
- Advertisement -

ಬಂಟ್ವಾಳ ತಾಲೂಕಿನ ಕಟ್ಟೆಮಾರ್ ಶ್ರೀ ಮಂತ್ರದೇವತಾ,ಸ್ವಾಮಿ ಕೊರಗಜ್ಜ, ಶ್ರೀ ಗುಳಿಗ ಸಾನಿಧ್ಯ ಕ್ಷೇತ್ರವು ತನ್ನ ಮಹಿಮೆಯನ್ನು ತೊರ್ಪಡಿಸಿದ ಅಪರೂಪದ ಘಟನೆ ಒಂದು ಸಂಭವಿಸಿದೆ.

ಫೆಬ್ರವರಿ10 ರಂದು ಸಾನಿಧ್ಯದಲ್ಲಿ ನಡೆದ ವಾರ್ಷಿಕ ಕೋಲೊತ್ಸವ ಸಂದರ್ಭದಲ್ಲಿ ಕ್ಷೇತ್ರದ ಭಕ್ತಿಯಾಗಿ ಆಗಮಿಸಿದ ಸುಳ್ಯ ಸಂಪಾಜೆಯ ಧನ್ಯ ಎಂಬ ಮಹಿಳೆಯ ಬ್ಯಾಗಿನಿಂದ ಸುಮಾರಿ 23 ಸಾವಿರ ರೂಪಾಯಿ ಹಣ ಕಳವಾಗಿತ್ತು. ಈ ಬಗ್ಗೆ ನೊಂದ ಮಹಿಳೆ ಶ್ರೀ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜನ ಕೋಲೊತ್ಸವದಲ್ಲಿ ದೈವದ ಮುಂದೆ ಹರಕೆ ಮಾಡಿದ್ದರು.

ದೈವವು ಕಳೆದುಕೊಂಡದ್ದನ್ನು ಆದಷ್ಟು ಬೇಗ ಒದಗಿಸುವುದಾಗಿ ಅಭಯ ನೀಡಿದ್ದು ಕೇವಲ ಒಂದೇ ದಿನದಲ್ಲಿ ತನ್ನ ಮಹಿಮೆಯನ್ನು ತೋರಿಸಿದೆ. ಇವತ್ತು ಬೆಳಿಗ್ಗೆ ಕ್ಷೇತ್ರದಲ್ಲಿ ಸಂಕ್ರಮಣ ನಿಮಿತ್ತ ಪೂಜಾ ಕಾರ್ಯಕ್ರಮ ನಡೆಯುತ್ತಿರುವಾಗ ಕಾಣಿಕೆ ಡಬ್ಬಿಯ ಅಡಿಯಲ್ಲಿ 23000 ರುಪಾಯ ಕಟ್ಟು ಒಂದನ್ನು ನೂಲಿನಲ್ಲಿ ಕಟ್ಟಿ ಇಟ್ಟದ್ದು ಗಮನಕ್ಕೆ ಬಂತು.

ವಿಚಿತ್ರ ಏನೆಂದರೆ ಆ ಮಹಿಳೆ ಹೊರಡುವ ಸಮಯದಲ್ಲಿ ಕಾಣಿಕೆ ಡಬ್ಬಿಯ ಬಳಿ ದುಡ್ಡಿನ ಕಟ್ಟು ನೂಲಿನಲ್ಲಿ ಸುತ್ತಿ ಗೋಚರಿಸಿದ್ದು ಕ್ಷೇತ್ರದ ಮಹಿಮೆಯಾಗಿದೆ.

- Advertisement -

Related news

error: Content is protected !!