ಕಟ್ಟೆಮಾರ್ : ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವು ಫೆ:10 ನೇ ಶನಿವಾರ ಮತ್ತು 11 ನೇ ಆದಿತ್ಯವಾರ ಶ್ರೀ ಮಂತ್ರದೇವತಾ ಕ್ಷೇತ್ರ ಸಾನ್ನಿಧ್ಯ ಕಟ್ಟೆಮಾರು ಇಲ್ಲಿ ನಡೆಯಲಿದೆ.
ಬೆಳಗ್ಗೆ ವಿವಿಧ ವೈದಿಕ ವಿಧಿವಿಧಾನಗಳು, ಭಜನಾ ಸೇವೆ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದ್ದು, ಸಂಜೆ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಹಾಸ್ಯ ವೈಭವ ನಡೆಯಲಿದೆ. ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ, ಹಾಗೂ ಶ್ರೀಮತಿ ಅಮೃತಾ ಅಡಿಗ ಭಾಗವಹಿಸಲಿದ್ದು, ಮುಮ್ಮೇಳದಲ್ಲಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರು ಭಾಗವಹಿಸಲಿದ್ದಾರೆ. ಸಂಜೆ ಹಲವು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10 ಗಂಟೆಯಿಂದ ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ಕೋಲೋತ್ಸವ ನಡೆಯಲಿದೆ.
ಫೆ. 11 ರಂದು ನಾಳೆ ಬೆಳಗ್ಗೆ 8 ಗಂಟೆಯಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಶೃಂಗೇರಿ ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 8 ರಿಂದ ಸ್ವಾಮಿ ಕೊರಗಜ್ಜ ಹಾಗೂ ಶ್ರೀ ಗುಳಿಗ ದೈವಗಳ ಕೋಲೋತ್ಸವ ನಡೆಯಲಿದೆ.