Sunday, June 29, 2025
spot_imgspot_img
spot_imgspot_img

ಕಡುಬು ಮಾಡಲು ಕಾಲಲ್ಲೇ ಎಲೆ ಕಟ್ಟಿದ ಬಹುಮುಖ ಪ್ರತಿಭೆ ಬಂಟ್ವಾಳದ ಕೌಶಿಕ್

- Advertisement -
- Advertisement -

ಬಂಟ್ವಾಳ:-ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಕಾಲಿನಲ್ಲೇ ಬರೆದು ಪ್ರಥಮ‌ ಶ್ರೇಣಿಯಲ್ಲಿ ಪಾಸ್ ಆಗಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ವಿದ್ಯಾರ್ಥಿ ಇದೀಗ ಮತ್ತೆ ಸುದ್ದಿಯಾಗಿದ್ದಾನೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೌಶಿಕ್ ಗಣೇಶ ಚತುರ್ಥಿ ದಿನ‌ ತುಳುನಾಡಿನ ವಿಶಿಷ್ಟ ಮತ್ತು‌ ಪ್ರಸಿದ್ದ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು‌ ಹಲಸಿನ‌ ಮರದ ಎಲೆಯನ್ನು ಮನೆಯಲ್ಲಿ ತನ್ನ‌ ಕಾಲ ಸಹಾಯದಿಂದಲೇ‌ ಕಟ್ಟಿದ್ದಾನೆ. ಇದೀಗ ಈತನ ಪರಿಶ್ರಮದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಈತ ಪ್ರತಿ ವರ್ಷ ಅಷ್ಟಮಿ ಹಾಗೂ ಗಣೇಶ ಚತುರ್ಥಿಗೆ ಇದೇ ರೀತಿ ಕಡುಬು ಕಟ್ಟಿತ್ತಿದ್ದ.ಈ ಬಾರಿ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ತನ್ನ ಕಾಲಿನ ಮೂಲಕವೇ ಬರೆದು, ರಾಜ್ಯಾದ್ಯಂತ ಎಲ್ಲರ‌ ಗಮನ‌ ಸೆಳೆದಿದ್ದು ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೌಶಿಕ್ ನನ್ನು ಮನೆಗೆ ಬಂದು ಭೇಟಿ ಮಾಡಿ ಪ್ರಶಂಸಿದ್ದರು.ಮಾತ್ರವಲ್ಲ ಪ್ರಥಮ‌ ಶ್ರೇಣಿಯಲ್ಲಿ ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದು ಎಲ್ಲರಲ್ಲೂ ಅಚ್ಚರಿ‌ ಮೂಡಿಸಿದ್ದ.ಇದೀಗ ಕಾಲಿನಿಂದಲೇ ಕಡುಬು ತಯಾರಿಸಿಯೂ ಎಲ್ಲರಿಂದಲೂ‌ ಮೆಚ್ಚುಗೆ ಗಳಿಸಿದ್ದಾನೆ.ಸಾಂಸ್ಕೃತಿಕ, ಕ್ರೀಡೆಗಳಲ್ಲೂ ಮುಂದಿರುವ ಕೌಶಿಕ್ ಎಲ್ಲರ ಅಚ್ಚುಮೆಚ್ಚಿನ‌ ವಿದ್ಯಾರ್ಥಿ.

- Advertisement -

Related news

error: Content is protected !!